ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳ ಸಪ್ತಾಹ ಕಾರ್ಯಕ್ರಮ..
✍🏻ಲೇಖನ, ಪ್ರಬಂಧ, ಪ್ರವಾಸ ಕಥನ, ಮಕ್ಕಳ ನಾಟಕ ರಚನೆ, ಕವನ ವಾಚನ ಹಾಗೂ ಇನ್ನಿತರ ಸ್ಪರ್ದೆಗಳು..
"ಬತ್ತದ ತೊರೆ ಸ್ನೇಹ ಬಳಗ" - ಕಾರಂತಜ್ಜನ ನೆರಳಿನಡಿಯಲ್ಲಿ.. ಎಂಬ ಅಡಿಬರಹದೊಂದಿಗೆ ಹುಟ್ಟಿಕೊಂಡ ಹೊಸ ಸಾಹಿತ್ಯ ಬಳಗವು ಅಕ್ಟೋಬರ್ ಮೊದಲ ವಾರದಲ್ಲಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳನ್ನು ನಡೆಸಲು ಮುಂದಾಗಿದೆ.
(೧) ದಿನಾಂಕ : ೦೪/೧೦/೨೦೨೧ ಸೋಮವಾರ ಕವನ ರಚನೆ ಹಾಗೂ ಕವನ ವಾಚನ ಸ್ಪರ್ಧೆ
(ವಿ.ಸೂ : ವಿಷಯ ನಿಮ್ಮ ಆಯ್ಕೆ. ಸಾಲುಗಳ ಮಿತಿ : ೨೦-೨೪ ಸಾಲುಗಳು. ಮೊಬೈಲ್ ಅಡ್ಡ ಹಿಡಿದು ವೀಡಿಯೋ ಮಾಡಿರಿ. ಸುಮಾರು ಮೂರು ನಿಮಿಷಗಳ ಕಾಲ)
(೨) ದಿನಾಂಕ : ೦೫/೧೦/೨೦೨೧ ಮಂಗಳವಾರ
"ನಾ ಓದಿದ ಕಾರಂತರ ಕಾದಂಬರಿ.. ವಿಮರ್ಶಾ ಲೇಖನ ಸ್ಪರ್ಧೆ"
(ವಿ.ಸೂ : ಪದಗಳ ಮಿತಿ ೧೦೦೦ ಪದಗಳು ಸುಮಾರು ಎರಡು ಪುಟಗಳಷ್ಟು)
(೩) ದಿನಾಂಕ : ೦೬/೧೦/೨೦೨೧ ಬುಧವಾರ
"ಲಲಿತ ಪ್ರಬಂಧಾ ಸ್ಪರ್ಧೆ"
(ವಿ.ಸೂ : ವಿಷಯ ನಿಮ್ಮದೇ ಇರಲಿ. ಪದಗಳ ಮಿತಿ ೧೦೦೦- ೧೫೦೦ (ಸುಮಾರು ಎರಡರಿಂದ ಮೂರು ಪುಟಗಳಷ್ಟು)
(೪) ದಿನಾಂಕ : ೦೭/೧೦/೨೦೨೧ ಗುರುವಾರ
ನೀವು ಭೇಟಿ ಮಾಡಿದ ಕುತೂಹಲಭರಿತ ಸ್ಥಳದ ಕುರಿತಾದ "ಪ್ರವಾಸ ಕಥನ"
(ವಿ.ಸೂ : ಪದಗಳ ಮಿತಿ ೧೦೦೦, ಸುಮಾರು ಎರಡು ಪುಟಗಳಷ್ಟು)
(೫) ದಿನಾಂಕ : ೦೮/೧೦/೨೦೨೧ ಶುಕ್ರವಾರ
"ಮಕ್ಕಳ ನಾಟಕ ರಚನೆ"
(ವಿ.ಸೂ : ವಿಷಯ ನಿಮ್ಮದೇ ಇರಲಿ. ಸುಮಾರು ಎರಡರಿಂದ ಮೂರು ಪುಟಗಳು, ಪಾತ್ರಗಳ ಸಂಖ್ಯೆ ೫-೭)
(೬) ದಿನಾಂಕ : ೦೯/೧೦/೨೦೨೧ ಶನಿವಾರ
ಚಟುವಟಿಕೆ ವಿಭಾಗದಲ್ಲಿ ಕಾರಂತರ ಭಾವಚಿತ್ರ ಅಥವಾ ಅವರ ಕಾದಂಬರಿಯ ಮುಖಪುಟದ ಚಿತ್ರವನ್ನು ಬಿಡಿಸುವುದು.
ನಿಯಮಗಳು :
೧) ಹಿರಿಯರು , ಕಿರಿಯರು, ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ.
೨) ಇಮೇಜ್ ಗಳನ್ನು ಸ್ವೀಕರಿಸುವುದಿಲ್ಲ.
೩) ಬರಹಗಳಿಗೆ ಸೂಕ್ತ ಶೀರ್ಷಿಕೆ ನೀಡಬೇಕಾಗಿ ಕೋರಿಕೆ.
೪) ಕೊನೆಯಲ್ಲಿ ನಿಮ್ಮ ಹೆಸರು, ಊರು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಿರಬೇಕು.
ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು. ಹಾಗೂ ಮೊದಲ ಮೂವರು ವಿಜೇತರಿಗೆ ಪುಸ್ತಕ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ : +91 7795743862
"ಕಾರಂತರ ಜನ್ಮದಿನದ ಅಂಗವಾಗಿ ಸ್ಪರ್ಧೆಗಾಗಿ" ಎಂದು ನಮೂದಿಸಿರಿ.
ನಿಮ್ಮ ಬರಹಗಳನ್ನು ಕಳುಹಿಸಬೇಕಾದ ಇ-ಮೇಲ್ ಐಡಿ : battadatore@gmail.com
ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿಕೆ.
ನಿರ್ವಾಹಕರು ಮತ್ತು ತೀರ್ಪುಗಾರರು
ಬತ್ತದ ತೊರೆ ಸ್ನೇಹ ಬಳಗ, ಬೆಂಗಳೂರು
No comments:
Post a Comment